ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
01-01-26 05:18 pm
HK News Desk
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm