ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm