ಬ್ರೇಕಿಂಗ್ ನ್ಯೂಸ್
27-09-23 12:57 pm Mangalore Correspondent ಕರಾವಳಿ
ಮಂಗಳೂರು, ಸೆ.27: ಬಸ್ ನಿಲ್ಲಿಸಿಲ್ಲ ಎಂದು ಕಂಡಕ್ಟರ್ ಮೇಲೆ ಯುವಕರ ತಂಡ ಹಲ್ಲೆಗೈದಿದ್ದಾರೆಂದು ಆರೋಪಿಸಿ ಅಡ್ಯಾರ್- ಕಣ್ಣೂರಿನಲ್ಲಿ ಬಸ್ ಚಾಲಕರು, ಮಾಲಕರು ಖಾಸಗಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಸಂಜೆ ಹಲ್ಲೆ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಆ ರೂಟಿನಲ್ಲಿ ಬಸ್ ಗಳನ್ನು ತಡೆದು ಸಿಬಂದಿಯೇ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಎರಡೂ ಕಡೆಯವರು ದೂರು ನೀಡಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಖಾದರ್ ಎಂಬವರು ಸಂಜೆ ವೇಳೆಗೆ ಎಸ್.ಕೆ. ಟ್ರಾವೆಲ್ಸ್ ಎಂಬ ಖಾಸಗಿ ಬಸ್ಸಿನಲ್ಲಿ ಬಂದಿದ್ದರು. ಕಣ್ಣೂರು ಸ್ಟಾಪ್ ನಲ್ಲಿ ಇಳಿಯಲಿದೆ, ಬಸ್ ನಿಲ್ಲಿಸುವಂತೆ ಹೇಳಿದರೂ, ಬಸ್ ಸಿಬಂದಿ ಮುಂದಕ್ಕೆ ಒಯ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತಿಗೆ ಮಾತು ಬೆಳೆದಿದ್ದು ಬಸ್ ನಿರ್ವಾಹಕನೇ ತನ್ನ ಮೇಲೆ ಹಲ್ಲೆಗೈದಿದ್ದಾನೆಂದು ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಬಸ್ ನಿರ್ವಾಹಕ ಯಶವಂತ್ ಮೇಲೆ ಅಬ್ದುಲ್ ಖಾದರ್ ಮತ್ತು ಅವರ ಸಹವರ್ತಿ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನುವ ದೂರು ಸಿಬಂದಿ ಕಡೆಯದ್ದು.


ಬಸ್ ನಿರ್ವಾಹಕ ಯಶವಂತ್ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಖಾಸಗಿ ಬಸ್ಸಿನ ಸಿಬಂದಿ ಸೇರಿ ಇಂದು ಅಡ್ಯಾರ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಡ್ಯಾರ್, ಕಣ್ಣೂರಿನಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ನಡೆಸದಂತೆ ಸಿಬಂದಿಯನ್ನು ಚದುರಿಸಿದ್ದಾರೆ. ಟೈಮಿಂಗ್ ಕಾರಣಕ್ಕೆ ಬಸ್ ನಿಲ್ಲಿಸಲು ಆಗಿರಲಿಲ್ಲ. ಅದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಿಬಂದಿ ಹೇಳುತ್ತಿದ್ದಾರೆ. ಹೀಗಾಗಿ ಖಾಸಗಿ ಬಸ್ ಗಳ ಅವಾಂತರಕ್ಕೆ ಕಾರಣವಾಗಿರುವ ಟೈಮಿಂಗ್ ಪದ್ಧತಿಯನ್ನೇ ಕೈಬಿಡಬೇಕೆಂದು ಸಿಬಂದಿ ಒತ್ತಾಯಿಸಿದ್ದಾರೆ.
Passneger assults bus conductor over trival issue at Kannur in Mangalore, Protest held. A counter case has been registered at Kankandy Town Police Station.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm