ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm