ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:00 pm
HK News Desk
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm