ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am