ಬ್ರೇಕಿಂಗ್ ನ್ಯೂಸ್
01-10-23 08:31 pm Mangalore Correspondent ಕರಾವಳಿ
ಮಂಗಳೂರು, ಅ.1: ಮಂಗಳೂರಿನಲ್ಲಿ ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮದ ಮೂಲಕ ಹೆಸರು ಮಾಡಿದ್ದ ಪ್ರಕಾಶ್ (43) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕದ್ರಿಯ ಮೌರಿಷ್ಕಾ ಅಪಾರ್ಟ್ಮೆಂಟ್ ನಲ್ಲಿರುವ ಮನೆಯಲ್ಲಿ ಭಾನುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷಗಳ ಹಿಂದೆಯೇ 1972ರ ವೇಳೆಗೆ ಜಯರಾಮ ಶೇಖ ಅವರು ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು. ಮೊದಲಿಗೆ ಜ್ಯೋತಿ ಎಂದಿದ್ದ ಹೆಸರನ್ನು ಬಳಿಕ ಎರಡನೇ ಮಗ ಮಹೇಶ್ ಹೆಸರಿಗೆ ಬದಲಿಸಿದ್ದರು. ಆರಂಭದಿಂದಲೇ ಮಂಗಳೂರಿನಿಂದ ಕೊಣಾಜೆ ರೂಟಿನಲ್ಲಿ ಬಸ್ ಉದ್ಯಮ ಆರಂಭಿಸಿದ್ದರು. ಆನಂತರ ಇತರ ರೂಟಿನಲ್ಲೂ ಮಹೇಶ್ ಬಸ್ ಸಂಚಾರ ಆರಂಭಿಸಿತ್ತು. ಮೂರನೇ ಮಗ ಪ್ರಕಾಶ್ ಶೇಖ ಉದ್ಯಮದಲ್ಲಿ ತೊಡಗಿಸಿಕೊಂಡ ಬಳಿಕ ವ್ಯವಹಾರ ವಿಸ್ತರಣೆಯಾಗಿತ್ತು.
ಕಳೆದ 15 ವರ್ಷಗಳಲ್ಲಿ ಮಹೇಶ್ ಹೆಸರಲ್ಲಿ ಟೂರಿಸ್ಟ್ ಉದ್ಯಮ, ಟಿಪ್ಪರ್, ಸಿಮೆಂಟ್ ಮಿಕ್ಸರ್ ಲಾರಿ ಹೀಗೆ ಹಲವಾರು ವ್ಯವಹಾರ ಮಾಡಿಕೊಂಡಿದ್ದರು. ಹಿರಿಯ ಪುತ್ರರಿಬ್ಬರು ಬೆಂಗಳೂರು, ಮುಂಬೈನಲ್ಲಿ ನೆಲೆಸಿದ ಬಳಿಕ ಪೂರ್ತಿ ಬಸ್ ಉದ್ಯಮದ ವ್ಯವಹಾರವನ್ನು ಪ್ರಕಾಶ್ ಅವರೇ ನೋಡಿಕೊಂಡಿದ್ದರು. ಆಪ್ತರ ಪ್ರಕಾರ, ನೂರಕ್ಕೂ ಹೆಚ್ಚು ಬಸ್ಗಳು ಅವರ ಒಡೆತನದಲ್ಲಿದ್ದವು. ಹಲವಾರು ಬಸ್ ಗಳನ್ನು ಬೇರೆ ಬೇರೆ ಕಡೆ ಖಾಸಗಿಯಾಗಿ ಕಾಂಟ್ರಾಕ್ಟ್ ಕೊಟ್ಟಿದ್ದರು. ಪ್ರಕಾಶ್ ಅವರು ಪತ್ನಿ ಮಕ್ಕಳ ಜೊತೆಗೆ ಕದ್ರಿಯ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. 80ರ ಹರೆಯದ ಜಯರಾಮ ಶೇಖ ಕುಲಶೇಖರದ ನಿವಾಸದಲ್ಲಿಯೇ ನೆಲೆಸಿದ್ದಾರೆ.
ಇಂದು ಬೆಳಗ್ಗೆ ಹೊರಗೆ ಹೋಗಿ ಬಂದಿದ್ದ ಪ್ರಕಾಶ್ ಮತ್ತೆ ಬೆಡ್ ರೂಮಿಗೆ ತೆರಳಿದ್ದರು. ಮಧ್ಯಾಹ್ನ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪತ್ನಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಬಸ್ ಮಾಲಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಪ್ರಕಾಶ್ ತುಂಬ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ತಂದೆಯ ಕಾಲದಿಂದಲೂ ಒಡನಾಟ ಇದೆ. ಜಿಲ್ಲಾ ಬಸ್ ಮಾಲಕರ ಸಂಘ ಗಾಢ ಶೋಕ ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
Mahesh travels bus owner Prakash Sheka commits suicide at his house in Mangalore. He owns more than 100 private buses in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm