ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.


ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm