ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm