ಬ್ರೇಕಿಂಗ್ ನ್ಯೂಸ್
10-11-20 08:39 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 10: ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶರತ್ ಮಡಿವಾಳ ಹತ್ಯೆಯಲ್ಲಿ ಪಾಲ್ಗೊಂಡವರು ಎಂಬಂತೆ ಬಿಂಬಿಸಿ ಪ್ರಚೋದನಕಾರಿ ಭಾಷಣ ಮಾಡಿರುವ ಹರಿಕೃಷ್ಣ ಬಂಟ್ವಾಳ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಬಂದು ಬಂಟ್ವಾಳ ನಗರ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಹರಿಕೃಷ್ಣ ಬಂಟ್ವಾಳ್ ಭಾಷಣ ಮಾಡುವಾಗ, ರೈ ಅವರನ್ನು ಕೊಲೆಗಾರರಂತೆ ಬಿಂಬಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ವಾಟ್ಸಾಪ್ ಮತ್ತು ಫೇಸ್ ಬುಕ್ ನಲ್ಲಿ ಹರಿದಾಡುತ್ತಿದ್ದು, ಇದರಿಂದ ರೈ ಘನತೆಗೆ ಧಕ್ಕೆ ಉಂಟಾಗಿದೆ. ಅಲ್ಲದೆ, ಪ್ರಾಣಭಯ ಎದುರಾಗಿದೆ. ಈಗಾಗಲೇ ಶರತ್ ಹತ್ಯೆ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿಕೊಂಡಿದ್ದು, ಪ್ರಕರಣ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ತನಿಖೆಯಲ್ಲಿದೆ. ಇಂಥ ಸಂದರ್ಭದಲ್ಲಿ ಈ ರೀತಿ ಆಪಾದನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.


ಮನವಿ ಸಲ್ಲಿಕೆ ವೇಳೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಸಹಿತ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
The Bantwal and Pane Mangaluru Block Congress members and leaders have filed a complaint against Keonics Chairman Harikrishna Bantwal for deformation statement made against Former Minister Ramanath Rai.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am