ಬ್ರೇಕಿಂಗ್ ನ್ಯೂಸ್
04-10-23 02:45 pm Mangalore Correspondent ಕರಾವಳಿ
ಮಂಗಳೂರು, ಅ.4: ವಿಶ್ವ ಹಿಂದು ಪರಿಷತ್ ಸ್ಥಾಪನೆಗೊಂಡು 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಂಡಿದ್ದು, ಅ.9ರಂದು ಮಂಗಳೂರಿಗೆ ಆಗಮಿಸಲಿದೆ. ಇದರ ಪ್ರಚಾರಾರ್ಥ ಮಂಗಳೂರಿನಲ್ಲಿ ಮತ್ತೊಂದು ಉಪ ರಥ ರಚಿಸಲಾಗಿದ್ದು ನಗರದ ಬಂಟ್ಸ್ ಹಾಸ್ಟೆಲಿನ ಕಾರ್ಯಾಲಯದಲ್ಲಿ ಚಾಲನೆ ನೀಡಲಾಗಿದೆ.
ಆರೆಸ್ಸೆಸ್ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್. ರಥಕ್ಕೆ ಚಾಲನೆ ನೀಡಿ, ವಿಶ್ವ ಹಿಂದು ಪರಿಷತ್ತಿನ 60ನೇ ವರ್ಷದ ಪ್ರಯುಕ್ತ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ದೇಶದ ಶೌರ್ಯದ ಇತಿಹಾಸವನ್ನು ಜನರಿಗೆ ತಿಳಿಸುವುದಕ್ಕಾಗಿಯೇ ಈ ಯಾತ್ರೆ ನಡೆಸಲಾಗುತ್ತಿದೆ. ನಮ್ಮ ದೇಶದಲ್ಲಿ ಸಾವಿರಾರು ವೀರರು ಜನ್ಮ ತಾಳಿದ್ದಾರೆ. ಅವರ ಇತಿಹಾಸವನ್ನು ನೆನಪಿಸಿಕೊಂಡು ಮತ್ತೆ ಹಿಂದುತ್ವದ ಪರಂಪರೆ ಶೌರ್ಯ ಬೆಳೆಸಿಕೊಳ್ಳುವಂತೆ ಮಾಡುವುದೇ ಇದರ ಉದ್ದೇಶ ಎಂದರು.
ವಿಹಿಂಪ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಮಾತನಾಡಿ, ನಮ್ಮ ದೇಶವನ್ನು ಹಾವಾಡಿಗರ ದೇಶವೆಂದು ಪಾಶ್ಚಿಮಾತ್ಯರು ಹೇಳುತ್ತಿದ್ದರು. ಅದಲ್ಲದೆ, ನಮ್ಮ ದೇಶದ ಶೌರ್ಯದ ಇತಿಹಾಸವನ್ನೂ ಮರೆ ಮಾಚಿದ್ದಾರೆ. ಶಿವಾಜಿ, ರಾಣಾ ಪ್ರತಾಪ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ವೀರರಾಣಿ ಅಬ್ಬಕ್ಕ ಹೀಗೆ ನಮ್ಮ ನಾಡು ನುಡಿಗಾಗಿ ಸಾವಿರಾರು ಮಂದಿ ಶೌರ್ಯದ ಇತಿಹಾಸ ದಾಖಲಿಸಿದ್ದಾರೆ. ಇಂಥ ವೀರ ಪರಂಪರೆ, ಇತಿಹಾಸ ನಮ್ಮ ದೇಶದ ಮೂಲೆ ಮೂಲೆಗಳಲ್ಲೂ ಸಿಗುತ್ತವೆ. ಇವನ್ನು ನಮ್ಮ ಇಂದಿನ ಯುವ ಜನಾಂಗ ಮರೆಯಬಾರದು. ನಮ್ಮ ಶಿಕ್ಷಣದಲ್ಲಿ ಇಂಥ ಇತಿಹಾಸಗಳು ಕಲಿಯುವುದಕ್ಕೆ ಸಿಗಲ್ಲ. ಅವನ್ನು ತಿಳಿಸುವುದಕ್ಕಾಗಿಯೇ ರಾಷ್ಟ್ರೀಯತೆ ಜಾಗೃತಿಗೊಳಿಸುವ ಉದ್ದೇಶದೊಂದಿಗೆ ಶೌರ್ಯ ಜಾಗರಣ ರಥಯಾತ್ರೆ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಗಿರಿಧರ್ ಶೆಟ್ಟಿ ಸೇರಿದಂತೆ ಬಜರಂಗದಳ ಮುಖಂಡರು ಉಪಸ್ಥಿತರಿದ್ದರು. ಉಪ ರಥವು ಮಂಗಳೂರು, ಮೂಲ್ಕಿ, ಮೂಡುಬಿದ್ರೆಯಲ್ಲಿ ಸಂಚರಿಸಲಿದ್ದು, ಅ.9ರಂದು ಕದ್ರಿ ಮೈದಾನ ಸೇರಲಿದೆ. ಅಂದು ಬೃಹತ್ ಸಮಾವೇಶ ನಡೆಯಲಿದ್ದು, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
The Vishwa Hindu Parishad (VHP) will mark the 60th anniversary of its founding in the state. To promote this, another sub-ratha has been formed in Mangaluru and launched at the office of Bunts Hostel in the city.
29-04-25 04:28 pm
HK News Desk
Praveen Nettaru, Mohsin Shukur, Karwar Police...
29-04-25 01:04 pm
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm