ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm