ಬ್ರೇಕಿಂಗ್ ನ್ಯೂಸ್
10-10-23 05:11 pm Udupi Correspondent ಕರಾವಳಿ
ಉಡುಪಿ, ಅ.10: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯದ ಮೂಲಕ ಜಾಮೀನು ಪಡೆದುಕೊಂಡಿರುವ ಶರಣ್ ಪಂಪ್ವೆಲ್ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು, ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ.
ಉಡುಪಿಯ ಸಮಾಜೋತ್ಸವದಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು ಉಡುಪಿ ಪೊಲೀಸರ ಆದೇಶದ ಬಗ್ಗೆ ತಿಳಿದು ಹೆಜಮಾಡಿಯಿಂದ ವಾಪಸ್ಸಾಗಿರುವ ಮಾಹಿತಿ ಲಭಿಸಿದೆ.
ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ನ್ಯಾಯಾಲಯ ನೀಡಿರುವ ಜಾಮೀನಿನಲ್ಲಿನ ಷರತ್ತಿನ ಅನ್ವಯ ಶರಣ್ ಪಂಪ್ವೆಲ್ ಅನುಮತಿ ಇಲ್ಲಿದೆ ದ.ಕ. ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಒಂದು ವೇಳೆ ಅದನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಗೆ ಆಗಮಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Bajrang Dal Shaurya Yatre in Udupi, Sharan Pumpwell stopped by Police over court order. Udupi police did not allow him to take part in the event.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm