ಬ್ರೇಕಿಂಗ್ ನ್ಯೂಸ್
10-10-23 08:22 pm Mangalore Correspondent ಕರಾವಳಿ
ಉಳ್ಳಾಲ, ಅ.10: ಈದ್ ಮಿಲಾದ್ ವಾಹನ ಜಾಥಾ ನೆಪದಲ್ಲಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಅಬ್ಬರಿಸಿ ಸಾರ್ವಜನಿಕರಿಗೆ ಕಿರಿ, ಕಿರಿ ನೀಡಿದ್ದ 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ದಂಡ ಪ್ರಯೋಗಿಸಿದ್ದಲ್ಲದೆ ಪೋಷಕರ ಮುಂದೆಯೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಳೆದ ಸೆ.28 ರಂದು ಪ್ರವಾದಿ ಮಹಮ್ಮದರ ಜನ್ಮದಿನದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ನಡೆದಿದ್ದ ಈದ್ ಮಿಲಾದ್ ಹಬ್ಬಕ್ಕೆ ಯುವಕರ ಗುಂಪೊಂದು ಕುತ್ತಾರು, ಮಾಡೂರು ಕಡೆಯಿಂದ ವಾಹನ ಜಾಥಾ ನಡೆಸಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಕಿರಿ,ಕಿರಿ ಉಂಟು ಮಾಡಿದಲ್ಲದೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ಏರಿ ವಿಕೃತವಾಗಿ ವರ್ತಿಸಿ ಘೋಷಣೆಗಳನ್ನ ಕೂಗಿದ್ದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯುವಕರ ವರ್ತನೆಗೆ ಮುಸ್ಲಿಂ ಧರ್ಮೀಯರೇ ಆಕ್ಷೇಪ ವ್ಯಕ್ತಪಡಿಸಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಮಾಡೂರಿನ ಇಬ್ರಾಹಿಂ, ಅಂಬ್ಲಮೊಗರುವಿನ ಮಹಮ್ಮದ್ ಅರ್ಷಾದ್ ಬಶೀರ್, ಪಡು ಮಾರ್ನಾಡುವಿನ ಅಶೀಶ್ ಪಿಂಟೊ, ಮಂಜನಾಡಿ ಗ್ರಾಮದ ಕೆ.ಎ.ಇಕ್ಬಾಲ್ ಅಬ್ದುಲ್ ರಹಿಮಾನ್, ಇಮ್ರಾನ್, ಇಬ್ರಾಹಿಂ ಬಾತಿಷ್ ಇಸ್ಮಾಯಿಲ್, ಉಮರ್ ಫಾರೂಕ್, ಅಬ್ದುಲ್ ಖಾದರ್, ಕೆ.ಎ.ಇಕ್ಬಾಲ್, ಬಜಾಲಿನ ಮಹಮ್ಮದ್ ಹುಸೇನ್, ಕೋಟೆಕಾರಿನ ಶೌಕತ್ ಆಲಿ, ಬೆಳ್ತಂಗಡಿಯ ಮಹಮ್ಮದ್ ನಿಝಾರ್, ಮಾಡೂರಿನ ಶೇಖ್ ಖಲೀಲ್ ಅಹ್ಮದ್, ಪಾವೂರಿನ ಇಬ್ರಾಹಿಂ, ಸಜೀಪ ನಡುವಿನ ಮಹಮ್ಮದ್ ಇರ್ಷಾದ್ ಸೇರಿದಂತೆ ಒಟ್ಟು 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡ ವಸೂಲು ಮಾಡಿದ್ದಾರೆ.
ಪೋಷಕರ ಸಮ್ಮುಖದಲ್ಲೇ ಉಳ್ಳಾಲ ಪೊಲೀಸ್ ಠಾಣಾ ನೂತನ ಪಿಐ ಬಾಲಕೃಷ್ಣ ಅವರು ಯುವಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾರದಾ ಉತ್ಸವಕ್ಕೂ ಡಿ.ಜೆ ಅಳವಡಿಸದಂತೆ ಇಲಾಖೆಯ ಆದೇಶ ಬಂದಿದ್ದು ಉಳ್ಳಾಲಕ್ಕೂ ಇದು ಅನ್ವಯಿಸಲಿದೆ ಎಂದು ಪಿಐ ಬಾಲಕೃಷ್ಣ ತಿಳಿಸಿದ್ದಾರೆ.
Mangalore Ullal eid disturbance by youths on abakka circle, Inapector warns all youths found in video.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm