ಬ್ರೇಕಿಂಗ್ ನ್ಯೂಸ್
11-10-23 10:25 pm Mangalore Correspondent ಕರಾವಳಿ
ಮಂಗಳೂರು, ಅ.11: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ, ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಮೂಲ್ಕಿ ನಿವಾಸಿ ಆಪತ್ಬಾಂಧವ ಎಂದು ಹೆಸರಾಗಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈಮಾಡಿದ್ದಾರೆಂದು ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.
ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ಬಂದು ಜೋರು ಮಾಡಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore social activist Asif Apathbhandava arrested for misbehaving with lady staff at hospital.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm