ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm