ಬ್ರೇಕಿಂಗ್ ನ್ಯೂಸ್
14-10-23 12:39 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಪ್ರಾರ್ಥನೆ ನಡೆಸುವಂತೆ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನಗರದ ಬಂದರು ಬಳಿಯ ಕಂದುಕ ಪ್ರದೇಶದ ನಿವಾಸಿಯಾಗಿರುವ ಜಾಕಿರ್ ಎಂಬಾತ ಈ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿರುವ ಈತ, ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಹೇಳಿದ್ದಾನೆ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿದ್ದ.
ನಿನ್ನೆ ಶುಕ್ರವಾರ ಹೆಚ್ಚಿನ ಮಸೀದಿಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರಾರ್ಥನೆ ನಡೆಸಲಾಗಿದೆ. ಇದೇ ವಿಚಾರದಲ್ಲಿ ಮಂಗಳೂರಿನ ರಾವ್ ಅಂಡ್ ರಾವ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಂಘಟನೆಯೊಂದು ಮೌನ ಪ್ರತಿಭಟನೆಗೆ ಸಜ್ಜಾಗಿತ್ತು. ಆದರೆನ ಕೊನೆ ಕ್ಷಣದಲ್ಲಿ ಧಾರ್ಮಿಕ ಮುಖಂಡರ ಸೂಚನೆಯಂತೆ ಪ್ರತಿಭಟನೆ ಕೈಬಿಡಲಾಗಿತ್ತು.
ಝಾಕಿರ್ ವಿಡಿಯೋ ಬಗ್ಗೆ ಹಿಂದು ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು ಉಗ್ರರನ್ನು ಬೆಂಬಲಿಸಿದ ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಈ ಬಗ್ಗೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿವೆ.
#Mangalore #Muslim man video dressed up like #ISIS requesting to supoort #Hamas goes viral. In the video he is seen requesting poeople to join hands with Hamas #israel #breakingnews pic.twitter.com/LA9Wad5BVJ
— Headline Karnataka (@hknewsonline) October 14, 2023
Mangalore Muslim man video dressed up like ISIS requesting to supoort Hamas goes viral. It is said that he is a resident of Bunder in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm