ಬ್ರೇಕಿಂಗ್ ನ್ಯೂಸ್
17-10-23 10:22 pm Mangalore Correspondent ಕರಾವಳಿ
ಮಂಗಳೂರು, ಅ.17: ದಸರಾ ಉತ್ಸವ ಸಮಯದಲ್ಲಿ ಕೊರಗ ಜನಾಂಗದ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆ ಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು ನಿಷೇಧಿಸಲಾಗಿದೆ.
ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿ ಚೂರು, ಮುಳ್ಳು ಮುಂತಾದವು ಇರುವ ಬಗ್ಗೆ, ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿಸಿ ಸೀಮಂತ ಹೆಣ್ಣಿನ ಮೇಲಿರುವ ದೃಷ್ಟಿ ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಈ ರೀತಿಯ ಚಟುವಟಿಕೆಗಳು ಕೊರಗರ ಅಜಲು ಪದ್ಧತಿ ನಿಷೇಧ ಕಾಯಿದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. 5ರಿಂದ 6 ವರ್ಷಗಳ ವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು. ಇಂತಹ ಪ್ರಸಂಗ ಪತ್ತೆಯಾದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ವಿವಿಧ ರೀತಿಯ ವೇಷಗಳನ್ನು ಹಾಕಿ ಕುಣಿಯುವುದು ಸಂಪ್ರದಾಯದ ನೆಲೆಯಲ್ಲಿ ನಡೆದುಬಂದಿದೆ. ಕೊರಗ ವೇಷ ನಿಷೇಧ ಇದ್ದರೂ ಕೆಲವು ಹಳ್ಳಿಗಳಲ್ಲಿ ಹರಕೆ ನೆಪದಲ್ಲಿ ಇಂತಹ ವೇಷಗಳನ್ನು ಹಾಕುವುದನ್ನು ಮುಂದುವರಿಸಲಾಗಿದೆ.
The acts of donning Koraga tribe costume, dancing in front of shops and homes, abusing the caste during Dasara and putting finger nails and hair in food and giving the same to women of Koraga community during Amavasya are prohibited.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 04:52 pm
HK Staffer
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm