ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm