ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm