ಬ್ರೇಕಿಂಗ್ ನ್ಯೂಸ್
18-10-23 07:58 pm Mangalore Correspondent ಕರಾವಳಿ
ಮಂಗಳೂರು, ಅ.18: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ.
ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಇವರು ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ನುಗ್ಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ನೇರವಾಗಿ ರಸ್ತೆಯಿಂದ ಹೊರಗೆ ಬಂದಿದ್ದು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ಯುವತಿಯರ ಮೇಲೆರಗಿದೆ. ಒಬ್ಬಳು ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರೆ, ಇತರ ನಾಲ್ಕು ಮಂದಿಯೂ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ಚಾಲಕನ ನಿಯಂತ್ರಣ ಇಲ್ಲದ ರೀತಿ ಹುಡುಗಿಯರ ಮೇಲೆ ಹರಿದಿದ್ದು ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ನಾಲ್ಕು ಹುಡುಗಿಯರಿಗೆ ಡಿಕ್ಕಿಯಾದ ಬಳಿಕ ರಸ್ತೆ ದಾಟುತ್ತಿದ್ದ ಇನ್ನೊಬ್ಬ ಮಹಿಳೆಗೂ ಡಿಕ್ಕಿಯಾಗಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಅಪಘಾತದ ಬಳಿಕ ಕಾರನ್ನು ನಿಲ್ಲಿಸದೆ, ಮಣ್ಣಗುಡ್ಡದ ಮನೆಗೆ ತೆರಳಿದ್ದ. ಮನೆಗೆ ಹೋಗಿ ತಂದೆಯ ಜೊತೆಗೆ ಪಾಂಡೇಶ್ವರ ಠಾಣೆಗೆ ಆಗಮಿಸಿದ್ದ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Mangalore Mannagudda accident, girls dies on spot after car rams her on the divider. The video of this has gone viral social media. The girls were on their way to the bus stand after visiting the kudroli temple for dasara.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm