ಬ್ರೇಕಿಂಗ್ ನ್ಯೂಸ್
18-10-23 10:42 pm Mangalore Correspondent ಕರಾವಳಿ
ಮಂಗಳೂರು, ಅ.18: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ನೆಪದಲ್ಲಿ ಸಂತೆ ವ್ಯಾಪಾರಸ್ಥರನ್ನು ವಿಭಜಿಸಿ ಹಿಂದುಗಳ ಅಂಗಡಿಗಳಿಗೆ ಭಗವಾಧ್ವಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ನೀಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ದ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದರು. ಅಲ್ಲದೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಹಿಂದೂಗಳು ಹಿಂದೂ ವ್ಯಾಪಾರಿಗಳಿಂದಲೇ ವ್ಯಾಪಾರ ಮಾಡುವಂತೆ ಹೇಳಿಕೆ ನೀಡಿದ್ದರು. ಈ ರೀತಿಯ ನಡೆಯನ್ನು ಜಾತ್ಯತೀತ ಪಕ್ಷಗಳ ನಾಯಕರು ಖಂಡಿಸಿ, ಇದರಿಂದ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆಯೆಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರು ಕೊಟ್ಟು ಕ್ರಮಕ್ಕೆ ಆಗ್ರಹಿಸಿದ್ದರು.
ಇದರಂತೆ, ಪಾಂಡೇಶ್ವರ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಐ ಮನೋಹರ್ ಪ್ರಸಾದ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಐಪಿಸಿ 153 ಎ ಅಡಿಯಲ್ಲಿ ಪ್ರಚೋದನೆಗೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬುಧವಾರ ಬೆಳಗ್ಗೆ ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ ಸಂಘಟನೆಗಳ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಅಲ್ಲದೆ, ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.
Mangalore Sumoto case registered against VHP Sharan Pumpwell over Mangaladevi temple saffron row.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm