ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm