ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am