ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm