ಬ್ರೇಕಿಂಗ್ ನ್ಯೂಸ್
25-10-23 12:34 pm Mangalore Correspondent ಕರಾವಳಿ
ಮಂಗಳೂರು, ಅ.25: ಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಯಲ್ಲಿ ಧರ್ಮಸ್ಥಳದ ಸೌಜನ್ಯಾ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡುರಸ್ತೆಯಲ್ಲಿ ನಿಲ್ಲಿಸಿ, ಸಂಚಾರಕ್ಕೆ ಅವಕಾಶ ನೀಡದೆ ಹಿಂದಕ್ಕೆ ಕಳಿಸಿದ ಪ್ರಸಂಗ ನಡೆದಿದೆ.
ದೇವಿ ಮಹಾತ್ಮೆ ಕಥಾನಕ ಬಿಂಬಿಸುವ ಚಿತ್ರಣದ ಸ್ತಬ್ಧಚಿತ್ರವನ್ನು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತೃತ್ವದಲ್ಲಿ ಮಾಡಲಾಗಿತ್ತು. ಟ್ಯಾಬ್ಲೋ ಎದುರಿನಲ್ಲಿ ಸೌಜನ್ಯಾ ಫೋಟೊ ಹಾಕಲಾಗಿತ್ತು. ಆದರೆ ಟ್ಯಾಬ್ಲೋ ರೆಡಿಯಾಗಿ ಬರುತ್ತಿದ್ದಂತೆ ಉರ್ವಾದಲ್ಲಿಯೇ ಪೊಲೀಸರು ಅಡ್ಡಹಾಕಿದ್ದಾರೆ. ಕೇಳಿದರೆ, ಕ್ಷೇತ್ರದ ಆಡಳಿತ ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸನ್ನ ರವಿ ಮತ್ತು ಜೊತೆಗಿದ್ದವರು ಕ್ಷೇತ್ರದ ಕಚೇರಿಗೆ ತೆರಳಿದಾಗ, ಅಲ್ಲಿದ್ದ ಸಮಿತಿ ಪದಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೆ ನುಣುಚಿಕೊಂಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ಅವರು, ಇಲ್ಲಿ ರಾಜಕೀಯ ಮಾಡಲು ಅವಕಾಶ ಇಲ್ಲ ಎಂದು ಹೇಳಿ ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಸನ್ನ ರವಿ, ನಮಗೆ ಪೊಲೀಸರು ಅವಕಾಶ ನಿರಾಕರಿಸಿಲ್ಲ. ಎಸಿಪಿಯವರು ನಮಗೆ ಪರವಾನಗಿ ನೀಡಿದ್ದರು. ಇವರೇ ಉದ್ದೇಶಪೂರ್ವಕ ಅಡ್ಡ ಹಾಕಿದ್ದಾರೆ. ಇವರಿಗೆ ಸೌಜನ್ಯಾ ಫೋಟೊ ಹಾಕಿದ ಮಾತ್ರಕ್ಕೆ ಏನು ತೊಂದರೆ ಆಗತ್ತೆ. ಅದರಲ್ಲಿ ಯಾವ ರಾಜಕೀಯ ಇದೆ. ಯಾರ್ಯಾರದ್ದೋ ಪುಂಡು ಪೋಕರಿಗಳ, ಸ್ಪಾನ್ಸರ್ ಕೊಟ್ಟವರ ಫೋಟೊ ಹಾಕುತ್ತಾರೆ. ನವರಾತ್ರಿ ಸಂದರ್ಭದಲ್ಲಿ ಇವರು ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪೊಲೀಸರು ಒಂದು ಹಂತದಲ್ಲಿ ಸೌಜನ್ಯಾ ಹೆತ್ತವರು, ಪ್ರತಿಭಟನೆಯ ಫೋಟೊ ಮುಚ್ಚುವಂತೆ ಹೇಳಿದ್ದರು. ಅದಕ್ಕೆ ಒಪ್ಪಿದ್ದ ಟ್ಯಾಬ್ಲೋದವರು ಫೋಟೊ ಕಾಣದಂತೆ ಪರದೆ ಮುಚ್ಚಿ ಹೋಗಲು ಮುಂದಾಗಿದ್ದರು. ಆದರೆ ಕೊನೆಯಲ್ಲಿ ಟ್ಯಾಬ್ಲೋ ಸಂಚಾರಕ್ಕೆ ಅವಕಾಶವನ್ನೇ ನೀಡಲಿಲ್ಲ.
Kudroli dasara 2023, Soujanya banner in tablo, stopped by police, prasanna ravi slams leaders in Mangalore.
27-04-25 07:13 pm
HK News Desk
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
27-04-25 08:42 pm
HK News Desk
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
ಸಿಂಧು ನದಿಯನ್ನು ತಡೆದರೆ ರಕ್ತ ಹರಿಯುತ್ತದೆ ; ಮಾಜಿ...
26-04-25 08:21 pm
Iran Blast: ಇರಾನ್ ಬಂದರಿನಲ್ಲಿ ಭಯಾನಕ ಸ್ಫೋಟ ; 4...
26-04-25 07:46 pm
27-04-25 06:25 pm
Mangalore Correspondent
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
KMF Elections 2025, Belupu Deviprasad Shetty:...
26-04-25 08:03 pm
NIA, PFI, DGP OM Prakash, Anupama Shenoy, Man...
26-04-25 07:11 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm