ಬ್ರೇಕಿಂಗ್ ನ್ಯೂಸ್
26-10-23 06:59 pm Mangalore Correspondent ಕರಾವಳಿ
ಪುತ್ತೂರು, ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ.
ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು. ಶಶಿಕಲಾ ಅವರು ಆ ಲಾಕೆಟ್ ನೊಂದಿಗೆ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ.
ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಶಶಿಕಲಾ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರ ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Mangalore Sullia woman photo with tiger claw goes viral on social media.
08-05-26 12:21 pm
HK News Staffer
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
08-05-26 12:06 pm
HK News Staffer
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಕೇರಳದಲ್ಲಿ ಸಿಎಂ ಗಾದಿಗೆ ಫೈಟ್ ; ವೇಣುಗೋಪಾಲ್ - ವಿ....
07-05-26 08:57 pm
ತಿರುಪತ್ತೂರಿನಲ್ಲಿ ಒಂದು ಮತದಿಂದ ಗೆದ್ದ ಟಿವಿಕೆ ಅಭ್...
07-05-26 06:20 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
07-05-26 08:00 pm
HK News Staffer
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am