ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm