ಬ್ರೇಕಿಂಗ್ ನ್ಯೂಸ್
30-10-23 04:44 pm Mangalore Correspondent ಕರಾವಳಿ
ಉಳ್ಳಾಲ, ಅ.30: ಆತ್ಮಹತ್ಯೆ ತಡೆಗೆಂದು ನೇತ್ರಾವತಿ ನದಿಯ ಸೇತುವೆಯ ಇಬ್ಬದಿಗೆ ಹಾಕಿದ್ದ ತಡೆ ಬೇಲಿಯನ್ನೇ ಹಾರಿ ಯುವಕನೋರ್ವ ನದಿಗೆ ಜಿಗಿದಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರಿನತ್ತ ಹುಂಡೈ ಐ10 ಕಾರಲ್ಲಿ ತೆರಳುತ್ತಿದ್ದ ಯುವಕನೋರ್ವ ಕಾರನ್ನ ಸೇತುವೆ ಬಳಿಯಲ್ಲೇ ನಿಲ್ಲಿಸಿದ್ದಾನೆ. ವಾಹನ ಸವಾರರು ನೋಡ ನೋಡುತ್ತಲೇ ಸೇತುವೆಯ ತುದಿಯ ಆವರಣ ಗೋಡೆ ಹಾರಿದ ಯುವಕ ಆವರಣ ಗೋಡೆಗೆ ಅಳವಡಿಸಲಾಗಿದ್ದ ಪೈಪ್ ಲೈನ್ ಗಳ ಮೇಲೆ ನಡೆಯುತ್ತಲೇ ಸೇತುವೆ ಮಧ್ಯ ಭಾಗ ತಲುಪಿ ನದಿಗೆ ಜಿಗಿದು ನೀರು ಪಾಲಾಗಿದ್ದಾನೆ. ಯುವಕ ನೀರು ಪಾಲಾಗುತ್ತಿರುವ ದೃಶ್ಯವನ್ನ ಕೆಲವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.


ಚಿಕ್ಕಮಂಗಳೂರು ಮೂಲದ ಪ್ರಸನ್ನ ಕುಮಾರ್ ಎಂಬವರ ಹೆಸರಲ್ಲಿ ಕಾರು ನೋಂದಣಿಗೊಂಡಿದೆ. ಅಲ್ಲದೆ, ಕಾರಲ್ಲಿ ಪ್ರಸನ್ನ ಅವರ ಡ್ರೈವಿಂಗ್ ಲೈಸೆನ್ಸ್ ದೊರಕಿದೆ. ಸ್ಥಳೀಯ ನಾಡದೋಣಿಗಳಿಂದ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಸನ್ನ ಅವರ ಫ್ಯಾಮಿಲಿಯನ್ನು ಪೊಲೀಸರು ಸಂಪರ್ಕಿಸಿದ್ದು ಪ್ರಸನ್ನ ಮತ್ತು ಸುಮನ್ ಎಂಬವರು ತರಕಾರಿ ಮಾರಾಟಕ್ಕೆಂದು ಮಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈಗ ನೀರಿಗೆ ಹಾರಿದ ವ್ಯಕ್ತಿ ಪ್ರಸನ್ನ ಹೌದಾ ಅಥವಾ ಬೇರೆ ವ್ಯಕ್ತಿಯೇ ಎಂದು ಗೊತ್ತಾಗಿಲ್ಲ.
ನೇತ್ರಾವತಿ ಸೇತುವೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆತ್ಮಹತ್ಯೆಗಳಿಗೆ ಕಡಿವಾಣ ಹಾಕಲು ಮಂಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಎರಡು ವರ್ಷಗಳ ಹಿಂದೆ ಸುಮಾರು 50 ಲಕ್ಷ ವೆಚ್ಚದಲ್ಲಿ ಸೇತುವೆಗೆ ಕಬ್ಬಿಣದ ತಡೆ ಬೇಲಿ ಅಳವಡಿಸಿತ್ತು. ಬೇಲಿ ಅಳವಡಿಸಿದ ನಂತರ ಸೇತುವೆಯಲ್ಲಿ ಹಾರಿ ಸಾಯುವುದು ಕಡಿಮೆಯಾಗಿತ್ತು. ಇದೀಗ ಬೇಲಿಯನ್ನೇ ಲೆಕ್ಕಿಸದೆ ಯುವಕ ನದಿಗೆ ಜಿಗಿದಿದ್ದು ಸಾವಿನ ದಾರಿ ಹಿಡಿದವನಿಗೆ ಬೇಲಿ ಅಡ್ಡಿಯಾಗಲ್ಲ ಎನ್ನುವ ಸಂದೇಶ ನೀಡಿದ್ದಾನೆ.
Chikmagaluru man jumps into Netravati river at Ullal bridge in Mangalore by parking his car aside.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm