ಬ್ರೇಕಿಂಗ್ ನ್ಯೂಸ್
31-10-23 09:41 pm Mangaluru Correspondent ಕರಾವಳಿ
ಉಳ್ಳಾಲ, ಅ.31: ರಾಜ್ಯದ 68 ವೈಯಕ್ತಿಕ ಸಾಧಕರು, 10 ಸಂಘ ಸಂಸ್ಥೆಗಳಿಗೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಕ್ರಿಕೆಟ್ ಆಟದಲ್ಲಿ ಉತ್ತುಂಗಕ್ಕೇರಿ ಬಂದ ಪ್ರಶಸ್ತಿ ಮೊತ್ತದಲ್ಲೇ ಜನಸೇವೆಯಲ್ಲಿ ತೊಡಗಿಸಿದ್ದ ಉಳ್ಳಾಲದ ಮಾರುತಿ ಜನಸೇವಾ ಸಂಘಕ್ಕೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕಳೆದ ಮೂವತ್ತು ವರುಷಗಳ ಹಿಂದೆ ಉಳ್ಳಾಲದ ಮೊಗವೀರ ಪಟ್ಣದಲ್ಲಿ ಹುಟ್ಟಿಕೊಂಡ ಮಾರುತಿ ಕ್ರಿಕೆಟರ್ಸ್ ತಂಡವು ಕ್ರಿಕೆಟ್ ಆಟದಲ್ಲಿ ಉತ್ತಮ ಪ್ರದರ್ಶನಗಳನ್ನ ನೀಡಿ ಸಿಕ್ಕಿದ ಪ್ರಶಸ್ತಿಯ ಮೊತ್ತವನ್ನ ಸಮಾಜ ಸೇವೆಗೆ ವಿನಿಯೋಗಿಸುತ್ತ ಮಾರುತಿ ಜನಸೇವಾ ಸಂಘವೆಂದು ಹೆಸರುವಾಸಿಯಾಗಿದೆ.
ವಿ.ವಿ ಮಟ್ಟದ ಖ್ಯಾತ ಕ್ರಿಕೆಟ್ ಆಟಗಾರರಾದ ಸುಧೀರ್ ವಿ. ಅಮೀನ್, ಅಶ್ವಥ್ ಪುತ್ರನ್, ಉದಯ ಸಾಲ್ಯಾನ್, ದಿನೇಶ್ ಕರ್ಕೇರ, ಅನಿಲ್ ಚರಣ್ ರಂತವರಿಗೆ ಇದೇ ತಂಡ ವೇದಿಕೆ ಆಗಿತ್ತು.
ಸಂಘದ ಬೆಳ್ಳಿಹಬ್ಬದ ನೆನಪಿಗಾಗಿ ಉಳ್ಳಾಲ ಮೊಗವೀರ ಸಂಘದ ಹಿರಿಯರು ಕಟ್ಟಿಸಿದ್ದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಗೆ ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಒಂದು ಮಹಡಿಯ ಸುಸಜ್ಜಿತ ಕಟ್ಟಡವನ್ನ ಮರು ನಿರ್ಮಿಸಿ ಕೊಟ್ಟು ಅದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉಳ್ಳಾಲದಲ್ಲಿ ಪ್ರಪ್ರಥಮವಾಗಿ ಎರಡು ದಿವಸಗಳ ಬೀಚ್ ಉತ್ಸವವನ್ನು ನಡೆಸಿ ಸರ್ವ ಧರ್ಮೀಯರಿಂದ ಶಹಬಾಷ್ ಗಳಿಸಿದ ಕೀರ್ತಿ ಮಾರುತಿ ಜನಸೇವಾ ಸಂಘಕ್ಕೆ ಸಲ್ಲುತ್ತದೆ.


ಕಡಲ್ಕೊರೆತಕ್ಕೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸಂಘದ ವತಿಯಿಂದ ಐದು ಮನೆ ನಿರ್ಮಿಸಿ ಕೊಡಲಾಗಿದೆ. ಕನಿಷ್ಟ ಎಂದರೂ ವರ್ಷಕ್ಕೆ ಐದು ಲಕ್ಷ ರೂ. ವ್ಯಯಿಸಿ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ಸ್ಥಳೀಯ ದೇವಸ್ಥಾನದ ಪ್ರಧಾನ ಅರ್ಚಕರು, ಗುರಿಕಾರ ವೃಂದ ಹಾಗೂ ದೈವ ನರ್ತಕರಿಗೆ ಸಹಾಯಧನ ವಿತರಣೆ,ಕೊರೊನ ಲಾಕ್ ಡೌನ್ ಸಂದರ್ಭ 6ಲಕ್ಷ ರೂ. ವೆಚ್ಚ ಭರಿಸಿ ಆಹಾರ ಕಿಟ್ ಗಳನ್ನ ಸಂಘದ ವತಿಯಿಂದ ವಿತರಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಮೂವತ್ತು ಕುಟುಂಬಕ್ಕೆ ಸಾಮೂಹಿಕ ವಿವಾಹ ಮಾಡುವ ಭವಿಷ್ಯದ ಯೋಜನೆಯನ್ನ ಸಂಘ ಇಟ್ಟುಕೊಂಡಿದೆ. ಮಾರುತಿ ಜನ ಸೇವಾ ಸಂಘವು ಕೆಲ ವರುಷಗಳ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಗಳಿಸಿದ್ದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
Ullal Maruthi Jana Seva Sangha to get karnataka rajyotsava award 2023 in Mangalore by Cricket charity.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm