ಬ್ರೇಕಿಂಗ್ ನ್ಯೂಸ್
31-10-23 09:41 pm Mangaluru Correspondent ಕರಾವಳಿ
ಉಳ್ಳಾಲ, ಅ.31: ರಾಜ್ಯದ 68 ವೈಯಕ್ತಿಕ ಸಾಧಕರು, 10 ಸಂಘ ಸಂಸ್ಥೆಗಳಿಗೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಕ್ರಿಕೆಟ್ ಆಟದಲ್ಲಿ ಉತ್ತುಂಗಕ್ಕೇರಿ ಬಂದ ಪ್ರಶಸ್ತಿ ಮೊತ್ತದಲ್ಲೇ ಜನಸೇವೆಯಲ್ಲಿ ತೊಡಗಿಸಿದ್ದ ಉಳ್ಳಾಲದ ಮಾರುತಿ ಜನಸೇವಾ ಸಂಘಕ್ಕೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕಳೆದ ಮೂವತ್ತು ವರುಷಗಳ ಹಿಂದೆ ಉಳ್ಳಾಲದ ಮೊಗವೀರ ಪಟ್ಣದಲ್ಲಿ ಹುಟ್ಟಿಕೊಂಡ ಮಾರುತಿ ಕ್ರಿಕೆಟರ್ಸ್ ತಂಡವು ಕ್ರಿಕೆಟ್ ಆಟದಲ್ಲಿ ಉತ್ತಮ ಪ್ರದರ್ಶನಗಳನ್ನ ನೀಡಿ ಸಿಕ್ಕಿದ ಪ್ರಶಸ್ತಿಯ ಮೊತ್ತವನ್ನ ಸಮಾಜ ಸೇವೆಗೆ ವಿನಿಯೋಗಿಸುತ್ತ ಮಾರುತಿ ಜನಸೇವಾ ಸಂಘವೆಂದು ಹೆಸರುವಾಸಿಯಾಗಿದೆ.
ವಿ.ವಿ ಮಟ್ಟದ ಖ್ಯಾತ ಕ್ರಿಕೆಟ್ ಆಟಗಾರರಾದ ಸುಧೀರ್ ವಿ. ಅಮೀನ್, ಅಶ್ವಥ್ ಪುತ್ರನ್, ಉದಯ ಸಾಲ್ಯಾನ್, ದಿನೇಶ್ ಕರ್ಕೇರ, ಅನಿಲ್ ಚರಣ್ ರಂತವರಿಗೆ ಇದೇ ತಂಡ ವೇದಿಕೆ ಆಗಿತ್ತು.
ಸಂಘದ ಬೆಳ್ಳಿಹಬ್ಬದ ನೆನಪಿಗಾಗಿ ಉಳ್ಳಾಲ ಮೊಗವೀರ ಸಂಘದ ಹಿರಿಯರು ಕಟ್ಟಿಸಿದ್ದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಗೆ ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಒಂದು ಮಹಡಿಯ ಸುಸಜ್ಜಿತ ಕಟ್ಟಡವನ್ನ ಮರು ನಿರ್ಮಿಸಿ ಕೊಟ್ಟು ಅದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉಳ್ಳಾಲದಲ್ಲಿ ಪ್ರಪ್ರಥಮವಾಗಿ ಎರಡು ದಿವಸಗಳ ಬೀಚ್ ಉತ್ಸವವನ್ನು ನಡೆಸಿ ಸರ್ವ ಧರ್ಮೀಯರಿಂದ ಶಹಬಾಷ್ ಗಳಿಸಿದ ಕೀರ್ತಿ ಮಾರುತಿ ಜನಸೇವಾ ಸಂಘಕ್ಕೆ ಸಲ್ಲುತ್ತದೆ.


ಕಡಲ್ಕೊರೆತಕ್ಕೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸಂಘದ ವತಿಯಿಂದ ಐದು ಮನೆ ನಿರ್ಮಿಸಿ ಕೊಡಲಾಗಿದೆ. ಕನಿಷ್ಟ ಎಂದರೂ ವರ್ಷಕ್ಕೆ ಐದು ಲಕ್ಷ ರೂ. ವ್ಯಯಿಸಿ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ಸ್ಥಳೀಯ ದೇವಸ್ಥಾನದ ಪ್ರಧಾನ ಅರ್ಚಕರು, ಗುರಿಕಾರ ವೃಂದ ಹಾಗೂ ದೈವ ನರ್ತಕರಿಗೆ ಸಹಾಯಧನ ವಿತರಣೆ,ಕೊರೊನ ಲಾಕ್ ಡೌನ್ ಸಂದರ್ಭ 6ಲಕ್ಷ ರೂ. ವೆಚ್ಚ ಭರಿಸಿ ಆಹಾರ ಕಿಟ್ ಗಳನ್ನ ಸಂಘದ ವತಿಯಿಂದ ವಿತರಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಮೂವತ್ತು ಕುಟುಂಬಕ್ಕೆ ಸಾಮೂಹಿಕ ವಿವಾಹ ಮಾಡುವ ಭವಿಷ್ಯದ ಯೋಜನೆಯನ್ನ ಸಂಘ ಇಟ್ಟುಕೊಂಡಿದೆ. ಮಾರುತಿ ಜನ ಸೇವಾ ಸಂಘವು ಕೆಲ ವರುಷಗಳ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಗಳಿಸಿದ್ದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
Ullal Maruthi Jana Seva Sangha to get karnataka rajyotsava award 2023 in Mangalore by Cricket charity.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm