ಬ್ರೇಕಿಂಗ್ ನ್ಯೂಸ್
01-11-23 05:42 pm Mangalore Correspondent ಕರಾವಳಿ
ಮಂಗಳೂರು, ನ.1: ಹೃದಯಾಘಾತದಿಂದ ನಿಧನರಾದ ಚಿತ್ರನಟ ಪುನೀತ್ ರಾಜ್ ಕುಮಾರ್ ಸ್ಮರಣೆಗಾಗಿ ಅವರ ಹೆಸರಲ್ಲಿ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ರಾಜ್ಯದಲ್ಲಿ 85 ಜಿಲ್ಲೆ ಮತ್ತು ತಾಲೂಕುಗಳಲ್ಲಿ ಇಸಿಜಿ ಜೊತೆಗೆ ಹಠಾತ್ ಹೃದಯಾಘಾತ ಆಗುವುದನ್ನು ತಡೆಯಲು ಉಚಿತವಾಗಿ ಇಂಜೆಕ್ಷನ್ ನೀಡಲಾಗುವುದು ಎಂದರು. ಅಲ್ಲದೆ ಜಯದೇವ ಸೇರಿದಂತೆ ರಾಜ್ಯದ 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು ಎಂದರು.


ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಅವರಿಗೆ ತಿಂಗಳಿಗೆ ಎರಡು ಸಾವಿರದಂತೆ ನೀಡಲಾಗುತ್ತಿದೆ. ಬಡವರ ಹಸಿವು ನೀಗಿಸುವ ದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 2.48 ಲಕ್ಷ ಫಲಾನುಭವಿಗಳಿದ್ದು ನಗದು ವರ್ಗಾವಣೆಯಡಿ ಇವರಿಗೆ 17.30 ಕೋಟಿ ರೂ. ಜಮೆಯಾಗಿದೆ. ಶಕ್ತಿ ಯೋಜನೆಯಡಿ ನಾಲ್ಕು ತಿಂಗಳಲ್ಲಿ ದ.ಕ. ಜಿಲ್ಲೆಯಲ್ಲಿ 183 ಲಕ್ಷ ಫಲಾನುಭವಿಗಳು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸಿದ್ದು ಇದರಿಂದ 6072 ಲಕ್ಷ ಆದಾಯ ಬಂದಿದೆ. ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ ಎಂದು ತೋರಿಸಿಕೊಟ್ಟಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಇದೇ ವೇಳೆ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಒಟ್ಟು 47 ಮಂದಿಗೆ ಹಾಗೂ 17 ಸಂಸ್ಥೆಗಳಿಗೆ ಪ್ರದಾನ ಮಾಡಲಾಯಿತು.
Free injection in the name of Puneeth Rajkumar to save people from Heart Attack says Dinesh Gundurao in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm