ಬ್ರೇಕಿಂಗ್ ನ್ಯೂಸ್
06-08-20 10:31 am Udupi Reporter ಕರಾವಳಿ
ಉಡುಪಿ, ಆಗಸ್ಟ್ 06: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ವೃದ್ಧೆಯನ್ನು ಪೊಲೀಸ್ ಅಧಿಕಾರಿ ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು ಸ್ಥಳೀಯ ಆಟೋ ಚಾಲಕರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಈ ಘಟನೆ ನಡೆದಿದೆ.
ಕುಕ್ಕಿಕಟ್ಟೆಯ ವೃದ್ಧೆಯೊರ್ವರು ಮನೆಯ ಬಾವಿಗೆ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿದ್ದರು. ಜೀವನ್ಮರಣದ ಸ್ಥಿತಿಯಲ್ಲಿದ್ದ ಅವರ ರಕ್ಷಣೆಗೆ ಯಾರು ಮುಂದಾಗದ ಕಾರಣ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಗಸ್ತಿನಲ್ಲಿದ್ದ ಎಸ್ ಐ ಸದಾಶಿವ ರಾ. ಗವರೋಜಿ ಅವರಿಗೆ ವಾಕಿ ಮೂಲಕ ಸಂದೇಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.
ಎಸ್ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ ಈ ಮೂವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದಿಸಿದ್ದಾರೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 08:17 pm
Mangalore Correspondent
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm