ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm