ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm