ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm