ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm