ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm