ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm