ಬ್ರೇಕಿಂಗ್ ನ್ಯೂಸ್
13-11-20 11:49 am Udupi Correspondent ಕರಾವಳಿ
ಉಡುಪಿ, ನ.13: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸರಕಾರಿ /ಖಾಸಗಿ/ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಕೋವಿಡ್ ಮಾರ್ಗಸೂಚಿಯಡಿ ಆರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರದೊಂದಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲಾ ಅಧ್ಯಾಪಕರು, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಾಲೇಜುಗಳಲ್ಲಿ ಅಧ್ಯಾಪಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ಶೀಲ್ಡ್ ಧರಿಸಬೇಕು. ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಆರಂಭಿಸುವಂತಿಲ್ಲ ಎಂದು ಅವರು ಸೂಚಿಸಿದರು.
ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಜಾಗೃತಿ ಮೂಡಿಸುವ ಬ್ಯಾನರ್ ಮತ್ತು ಫಲಕಗಳನ್ನು ಅಳವಡಿಸಬೇಕು. ಕೋವಿಡ್ ನಿಯಂತ್ರಣ ಕುರಿತಂತೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಚನ ಪಡೆಯಬೇಕು. ಪ್ರತೀ ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ ರಚಿಸಬೇಕು ಎಂದರು.

ಕಾಲೇಜಿಗೆ ಬರಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಪಠ್ಯಗಳನ್ನು ಆನ್ಲೈನ್ ಮೂಲಕ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತಂದು ಬಳಸಬೇಕು. ತಮ್ಮ ವಸ್ತುಗಳನ್ನು ಇತರೆ ವಿದ್ಯಾರ್ಥಿಗಳೊಂದಿಗೆ ಹಂಚಿ ಕೊಳ್ಳದಂತೆ ತಿಳಿಸಿದ ಜಿಲ್ಲಾಧಿಕಾರಿ, ಯಾವುದೇ ವಿದ್ಯಾರ್ಥಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಾಲೇಜು ವತಿಯಿಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ, ಪರೀಕ್ಷೆ ಮಾಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್ ವೈ., ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ ಹಾಗೂ ಜಿಲ್ಲೆಯ ವಿವಿಧ ಸರಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
PU colleges to reopen on November 17 in Udupi and students coming to college should appear with a permission letter from parents states DC Jagadeesh.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm