ಬ್ರೇಕಿಂಗ್ ನ್ಯೂಸ್
06-11-23 12:09 pm Mangalore Correspondent ಕರಾವಳಿ
ಉಳ್ಳಾಲ, ನ.6: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಐದು ವರ್ಷದ ಹೆಣ್ಮಗಳ ಚಿಕಿತ್ಸೆಗಾಗಿ ಉಳ್ಳಾಲದ ಟೀಮ್ ಹನುಮಾನ್ ಸಂಘಟನೆಯ ಉತ್ಸಾಹಿ ಯುವಕರ ತಂಡವು ನವರಾತ್ರಿಯಂದು ವೇಷ ಧರಿಸಿ ಕುಣಿದು ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ದುಡ್ಡನ್ನು ದೇಣಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಉಳ್ಳಾಲ ಧರ್ಮನಗರ ನಿವಾಸಿ ರಂಜಿನಿ ಎಂಬವರ ಐದು ವರ್ಷದ ಮಗಳು ಶ್ರೇಯಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ತಗುಲಲಿದೆ. ರಂಜಿನಿ ಅವರ ಕುಟುಂಬ ಆರ್ಥಿಕವಾಗಿ ಸೊರಗಿದ್ದು ಮಗಳ ಕಾಯಿಲೆಯ ಚಿಕಿತ್ಸೆಗೆ ಹಣ ಭರಿಸಲು ಅಶಕ್ತವಾಗಿದೆ. ಶ್ರೇಯಾಳ ಚಿಕಿತ್ಸೆಗೆ ಸಹಕರಿಸಲು ಮುಂದಾದ ಸ್ಥಳೀಯ ಟೀಮ್ ಹನುಮಾನ್ ತಂಡದ ಎಳೆಯ ಪ್ರಾಯದ ಯುವಕರು ಕಳೆದ ನವರಾತ್ರಿಯಂದು ಯಕ್ಷಗಾನ ಶೈಲಿಯ ವೇಷ ಧರಿಸಿ ಮನೆ ಮನೆಗೆ ತೆರಳಿ ಕುಣಿದು ಹಣ ಸಂಪಾದಿಸಿದ್ದಾರೆ.



ಅಲ್ಲದೆ, ಉಳ್ಳಾಲ ಶಾರದೋತ್ಸವಕ್ಕೂ ಟ್ಯಾಬ್ಲೋ ಇಳಿಸಿ ಶೋಭಾಯಾತ್ರೆಗೆ ಮೆರುಗು ನೀಡಿದ್ದಾರೆ. ವೇಷ ತೊಟ್ಟು ಕ್ರೋಢೀಕರಿಸಿದ ಒಟ್ಟು 1,67,649 ರೂಪಾಯಿಗಳ ಚೆಕ್ಕನ್ನ ಧರ್ಮ ನಗರದ ನಾಗ ಸಾನಿಧ್ಯದಲ್ಲಿ ಟೀಮ್ ಹನುಮಾನ್ ಯುವಕರು ಹಿರಿಯರ ಕೈಯಿಂದ ರಂಜಿನಿ ಅವರಿಗೆ ಹಸ್ತಾಂತರಿಸಿದ್ದಾರೆ. ಕಳೆದ ವರ್ಷವೂ ಯುವಕರು ನವರಾತ್ರಿಗೆ ವೇಷ ಧರಿಸಿ ಸಂಗ್ರಹಗೊಂಡ 1,26,000 ರೂ.ಗಳನ್ನ ಮೂಡುಬಿದಿರೆಯ ಐದು ವರ್ಷದ ಕ್ಯಾನ್ಸರ್ ಪೀಡಿತ ಬಾಲಕಿ ಶ್ರೇಯಾ ಎಂಬವಳಿಗೆ ನೀಡಿದ್ದು ಆಕೆ ಈಗ ಕ್ಯಾನ್ಸರ್ ನಿಂದ ಗುಣಮುಖವಾಗಿ ಶಾಲೆಗೆ ತೆರಳುತ್ತಿರುವುದು ಖುಷಿ ಕೊಟ್ಟಿದೆ ಎಂದು ತಂಡದ ಮುಖ್ಯಸ್ಥ ಜಗದೀಶ್ ಗೋಳಿಯಾಡಿ ತಿಳಿಸಿದ್ದಾರೆ.
ಸರಕಾರಿ ಆಸ್ಪತ್ರೆಯ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿರುವ ಖಾಸಗಿ ಮೆಡಿಕಲ್ ಮಾಫಿಯಾಗಳ ಮುಂದೆ ಬಡ ಜನರು ಕಾಯಿಲೆ ಗುಣಪಡಿಸಲು ದಿನನಿತ್ಯವೂ ಭಿಕ್ಷೆ ಬೇಡುವ ಸ್ಥಿತಿ ಬಂದೊದಗಿದೆ. ಇಂತಹ ಕಾಲ ಘಟ್ಟದಲ್ಲಿ ಪರರ ಕಣ್ಣೀರೊರೆಸಲು ವೇಷ ಧರಿಸಿ ಹಣ ಸಂಗ್ರಹಿಸುವ ಯುವಕರ ಉದಾರತೆಗೆ ಶಹಬಾಷ್ ಎನ್ನಲೇ ಬೇಕು.
Ullal Five year old girl suffers from Heart issue, Youths collect money by dancing for Dasara, donate 1.70 lakhs in Mangalore.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm