ಬ್ರೇಕಿಂಗ್ ನ್ಯೂಸ್
06-11-23 11:02 pm Mangalore Correspondent ಕರಾವಳಿ
ಮಂಗಳೂರು, ನ.6: ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಬಳಕೆಗೆಂದು ಖರೀದಿಸಿದ್ದ ಇನ್ನೋವಾ ಕ್ರಿಸ್ಟಾ ಕಾರು ಬೆಂಗಳೂರಿನಲ್ಲಿ ಓಡಾಡುತ್ತಿದೆ. ಹೌದು.. ದೇವಸ್ಥಾನದ ದುಡ್ಡಿನಲ್ಲಿಯೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಈ ಕಾರು ಬಳಕೆಯಾಗುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ವಿಐಪಿಗಳ ಉಪಯೋಗಕ್ಕೆಂದು 2019ರಲ್ಲಿ ಹೊಸ ಇನ್ನೋವಾ ಕಾರನ್ನು ಖರೀದಿಸಲಾಗಿತ್ತು. ಆರಂಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೇ ಈ ಕಾರನ್ನು ಬಳಕೆ ಮಾಡುತ್ತಿದ್ದರು. ಎರಡೇ ತಿಂಗಳಲ್ಲಿ ಈ ಕಾರು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿತ್ತು. ಆಕರ್ಷಕವಾಗಿದ್ದ ಈ ಕಾರನ್ನು ತಮಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರಿನ ಇಲಾಖಾ ಆಯುಕ್ತರ ಕಚೇರಿಗೆ ಕಳುಹಿಸಿಕೊಡಲು ಸೂಚನೆ ಬಂದಿತ್ತು. ಕೂಡಲೇ ಕಳಿಸಿಕೊಡದಿದ್ದರೆ ಕ್ರಮ ಜರುಗಿಸುತ್ತೇವೆ ಎಂದು 2019ರ ಡಿಸೆಂಬರ್ 12ರಂದು ಇಲಾಖೆ ಆಯುಕ್ತರು ಬೆದರಿಸಿದ್ದರು. ಇದಕ್ಕೆ ಹೆದರಿದ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕಾರಿಗಳು ಮರುದಿನವೇ ಆ ವಾಹನವನ್ನು ಬೆಂಗಳೂರಿಗೆ ಕಳಿಸಿಕೊಟ್ಟಿದ್ದರು.


ವಿಶೇಷ ಅಂದ್ರೆ, ದೇವಸ್ಥಾನದಿಂದ ಕೊಟ್ಟಿದ್ದ ಕಾರು ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆ ಮಾಡುತ್ತಿದ್ದರೂ, ಪ್ರತಿವರ್ಷ ಇನ್ಶೂರೆನ್ಸ್, ವಾಹನ ನಿಯಮಗಳ ಉಲ್ಲಂಘನೆಗೆ ನೀಡಲಾಗುವ ದಂಡದ ಮೊತ್ತ ದೇವಸ್ಥಾನದಿಂದಲೇ ತೆರಲಾಗುತ್ತಿದೆ. ಹಲವು ಬಾರಿ ದಂಡದ ಮೊತ್ತವನ್ನು ದೇಗುಲದ ಖಾತೆಯಿಂದಲೇ ಸಂದಾಯ ಮಾಡಲಾಗಿದೆ. ಎರಡು ತಿಂಗಳಿಗೊಮ್ಮೆ 50 ಸಾವಿರ ರೂಪಾಯಿ ಮೊತ್ತವನ್ನು ಕಾರಿನ ನಿರ್ವಹಣೆ ಹಾಗೂ ಇತರ ಖರ್ಚು ಎಂದು ದೇವಸ್ಥಾನದಿಂದಲೇ ಭರಿಸಲಾಗುತ್ತಿದೆ.
ಕಾರನ್ನು ಬೆಂಗಳೂರು ಇಲಾಖೆ ಕಚೇರಿಯಲ್ಲಿ ಬಳಕೆ ಮಾಡಿ, ಅದರ ನಿರ್ವಹಣಾ ಮೊತ್ತವನ್ನು ದೇವಸ್ಥಾನದ ಖಾತೆಯಿಂದ ಭರಿಸುತ್ತಿರುವುದಕ್ಕೆ ಲೆಕ್ಕ ಪರಿಶೋಧನೆ ವೇಳೆ ಆಕ್ಷೇಪ ವ್ಯಕ್ತವಾಗಿದೆ. ಇದರಿಂದಾಗಿ ಇತ್ತೀಚೆಗೆ ಎರಡು ತಿಂಗಳಿಗೊಮ್ಮೆ ಸಲ್ಲಿಕೆಯಾಗುತ್ತಿದ್ದ ನಿರ್ವಹಣಾ ಮೊತ್ತಕ್ಕೆ ತಡೆ ಬಿದ್ದಿದೆ. ಇನ್ಶೂರೆನ್ಸ್, ದಂಡ ಸೇರಿ ಇತರೇ ಖರ್ಚನ್ನು ದೇವಳದಿಂದಲೇ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ದೇವಸ್ಥಾನದ ಸಿಇಓ ಲಿಂಗಯ್ಯ ಅವರಲ್ಲಿ ಕೇಳಿದಾಗ, ಆ ಕಾರನ್ನು ಮರಳಿ ಸುಬ್ರಹ್ಮಣ್ಯಕ್ಕೇ ಕಳಿಸುವಂತೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದ್ದಾರೆ. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡೋ ರೀತಿ ಬೆಂಗಳೂರಿನ ಅಧಿಕಾರಿಗಳು ನಾಲ್ಕು ವರ್ಷಗಳಿಂದ ದೇವಸ್ಥಾನದ ದುಡ್ಡಲ್ಲಿ ಕಾರನ್ನು ಓಡಿಸುತ್ತ ಮೆರೆದಾಡಿದ್ದಾರೆ.
Kukke Subramanya is the richest temple in the muzrai department in the state. The Innova Crysta, which was purchased four years ago for temple use, is plying in Bengaluru. Yes The car is being used for the service of officials in Bengaluru with the temple's money.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm