ಬ್ರೇಕಿಂಗ್ ನ್ಯೂಸ್
11-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.11: ಸಾರ್ವಜನಿಕ ಕಟ್ಟಡ, ಬಡಾವಣೆ ಇರುವ ನಗರ ಪ್ರದೇಶಗಳಲ್ಲಿ ಅಥವಾ ರಸ್ತೆ ಬದಿಗಳಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ನೀಡಬಾರದು ಎಂಬ ಹೈಕೋರ್ಟ್ ಸೂಚನೆಯಂತೆ ಮಂಗಳೂರಿನಲ್ಲಿ ಪಟಾಕಿ ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಲ್ಲೆಂದರಲ್ಲಿ ರಸ್ತೆ ಬದಿ ಪಟಾಕಿ ದಾಸ್ತಾನು ಇಡಬಾರದು ಅನ್ನುವ ನೆಲೆಯಲ್ಲಿ ಮಂಗಳೂರು ನಗರದ ನೆಹರು ಮೈದಾನ ಸೇರಿದಂತೆ ನಾಲ್ಕು ಕಡೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಮಾಡಲಾಗಿದೆ.
ಜಿಲ್ಲಾಧಿಕಾರಿ ಸೂಚನೆಯಂತೆ, ಮಹಾನಗರ ಪಾಲಿಕೆಯಿಂದಲೇ ಬಿಡ್ ಕರೆದು ಸ್ಟಾಲ್ ಗಳನ್ನು ಹರಾಜಿನಲ್ಲಿ ಮಾರಾಟಗಾರರಿಗೆ ನೀಡಲಾಗಿದೆ. ಅದರಂತೆ, ನೆಹರು ಮೈದಾನ, ಬೋಂದೆಲ್ ಮೈದಾನ, ಪಚ್ಚನಾಡಿ ಪ್ರದೇಶ ಮತ್ತು ಬೈಕಂಪಾಡಿ ಎಪಿಎಂಸಿ ಕಟ್ಟಡದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಕೊಡಲಾಗಿದೆ. ಎರಡು ದಿನದ ಹಿಂದೆ ಮಹಾನಗರ ಪಾಲಿಕೆಯಿಂದಲೇ ಈ ರೀತಿಯ ಹರಾಜು ಹಾಕಿ, ಸ್ಟಾಲ್ ಹಂಚಿಕೆ ಮಾಡಿದ್ದರೂ, ನಗರದ ಪಿವಿಎಸ್ ವೃತ್ತದ ಬಳಿ ಪಟಾಕಿ ಮಾರಾಟದ ಅಂಗಡಿ ತೆರೆದುಕೊಂಡಿದೆ.

ವೃತ್ತದ ಬಳಿಯಲ್ಲೇ ರಸ್ತೆ ಬದಿಯಲ್ಲಿ ಪಟಾಕಿ ದಾಸ್ತಾನಿರಿಸಿ ಮಾರಾಟ ಮಾಡಲಾಗುತ್ತಿದ್ದು, ಶನಿವಾರ ಸಂಜೆ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಮುಗಿಬಿದ್ದಿದ್ದರು. ಅತ್ತ ನೆಹರು ಮೈದಾನ ಇನ್ನಿತರ ಕಡೆಗಳಲ್ಲಿ ಇನ್ನೂ ಸ್ಟಾಲ್ ಹಾಕಿಲ್ಲ. ಶನಿವಾರ ಸಂಜೆಯಷ್ಟೇ ಸ್ಟಾಲ್ ವಿತರಣೆ, ಮಾರ್ಕಿಂಗ್ ಮಾಡಿಕೊಟ್ಟಿದ್ದರಿಂದ ಅಲ್ಲಿ ಮಾರಾಟಗಾರರು ಸ್ಟಾಲ್ ಹಾಕಲು ವಿಳಂಬ ಆಗಿತ್ತು. ರಾತ್ರಿ ವೇಳೆಯೂ ಸ್ಟಾಲ್ ಹಾಕುವ ಕೆಲಸದಲ್ಲಿ ನಿರತರಾಗಿದ್ದರು. ಹೀಗಾಗಿ ಇತರ ಯಾವುದೇ ಕಡೆ ಪಟಾಕಿ ಲಭ್ಯ ಇರಲಿಲ್ಲ. ಇದೇ ವೇಳೆ, ಬಂದರಿನ ಮಾಯಾ ಟ್ರೇಡರ್ಸ್ ಮತ್ತು ಪಿವಿಎಸ್ ವೃತ್ತದಲ್ಲಿ ಪ್ರವೀಣ್ ಶೇಟ್ ಕ್ರಾಕರ್ಸ್ ಶಾಪ್ ನವರು ಮಾತ್ರ ಪಟಾಕಿ ಅಂಗಡಿ ತೆರೆದಿದ್ದರು. ಪಿವಿಎಸ್ ವೃತ್ತದಲ್ಲಿ ತಾತ್ಕಾಲಿಕ ಶೆಡ್ ನಲ್ಲಿ ಪಟಾಕಿ ಮಾರುತ್ತಿದ್ದರೂ, ಅಧಿಕಾರಿಗಳು ಅದಕ್ಕೆ ಮಾತ್ರ ಅವಕಾಶ ನೀಡಿರುವುದು ಸಂಶಯಕ್ಕೆ ಕಾರಣವಾಗಿದೆ.
ನೆಹರು ಮೈದಾನದಲ್ಲಿ ಸ್ಟಾಲ್ ಹಾಕುತ್ತಿದ್ದ ಮಾರಾಟಗಾರರು ಈ ಬಗ್ಗೆ ಆಕ್ಷೇಪ ಎತ್ತಿದ್ದು, ನಾವು ಮಾತ್ರ ಮೈದಾನದಲ್ಲಿ ಮಾರಾಟ ಮಾಡಬೇಕು. ಅವರಿಗೆ ಮಾತ್ರ ರಸ್ತೆ ಬದಿ ಅವಕಾಶ ಕೊಟ್ಟಿದ್ದಾರೆ. ಬಂದರು ಮತ್ತು ಪಿವಿಎಸ್ ವೃತ್ತ ಜನನಿಬಿಡ ಸಾರ್ವಜನಿಕ ಪ್ರದೇಶ ಅಲ್ಲವೇ.. ಇದರ ಹಿಂದೆ ಯಾರಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
Partiality in cracker stall permission by MCC in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm