ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm