ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm