ಬ್ರೇಕಿಂಗ್ ನ್ಯೂಸ್
13-11-23 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13: ಬಿಜೆಪಿ ಯುವಮೋರ್ಚಾ, ಬೆಳ್ತಂಗಡಿ ಬಿಜೆಪಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣ ವಠಾರದಲ್ಲಿ ದೀಪಾವಳಿ ಪ್ರಯುಕ್ತ 4ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಜನರು ಸೇರಿ ವಿವಿಧ ಮಾದರಿಯ ದೋಸೆಗಳನ್ನು ಸವಿದರು.
ಇದೇ ವೇಳೆ, ಗೋವಿಗೆ ದೋಸೆಯನ್ನು ತಿನ್ನಿಸಿ ಗೋಪೂಜೆಯನ್ನೂ ಮಾಡಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೂ ನಡೆದಿದ್ದು ಆಕರ್ಷಣೆ ಪಡೆಯಿತು. ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಪ್ರಮುಖರಿದ್ದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ಬೆಳ್ತಂಗಡಿಯಂತಹ ಗ್ರಾಮಾಂತರ ಭಾಗದಲ್ಲಿ ಇಂತಹ ಸಾಮೂಹಿಕ ದೀಪಾವಳಿ ಹಬ್ಬವನ್ನು ಆಯೋಜಿಸಿದ ಹರೀಶ್ ಪೂಂಜಾರವರು ಈ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹಿಂದೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಪೋಷಿಸಿಕೊಂಡು ಹೋಗುವಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿವೆ ಎಂದರು.
ನರೇಂದ್ರ ಮೋದಿ ಈ ದೇಶಕ್ಕೆ ಪ್ರಧಾನ ಮಂತ್ರಿ ಆದ ಬಳಿಕ ಹಿಂದೂ ಸಂಸ್ಕ್ರತಿ ಬೆಳಗುತ್ತಿದೆ. ಹಲವು ಪುಣ್ಯಕ್ಷೇತ್ರಗಳು, ಪುಣ್ಯ ನದಿಗಳನ್ನು ಅಭಿವೃದ್ಧಿ ಪಡಿಸಿ ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯನ್ನು ಮೇಲೆತ್ತಿ ಇಡೀ ವಿಶ್ವ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ಜನವರಿಯಲ್ಲಿ ಅಯೋಧ್ಯೆಗೆ ಪ್ರಭು ಶ್ರೀರಾಮಚಂದ್ರನ ಆಗಮನವಾಗುತ್ತಿದ್ದು ಇದರೊಂದಿಗೆ ಇಡೀ ಭಾರತ ದೇಶದ ಸಂಸ್ಕೃತಿ, ಧಾರ್ಮಿಕ ಭಾವನೆ, ನಂಬಿಕೆಗಳು ಉತ್ತುಂಗಕ್ಕೆ ಹೋಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಹಿಂದುಗಳ ಗಣಪತಿ ಹಬ್ಬಕ್ಕೆ, ದೀಪಾವಳಿಗೆ ಹಲವು ನಿರ್ಬಂಧಗಳನ್ನು ಹಾಕುವುದನ್ನು ಕಂಡಿದ್ದೇವೆ. ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಲ್ಲುವ ಅನಿವಾರ್ಯತೆ ಬಂದಿದೆ. ಇಂತಹ ಸಾಮೂಹಿಕ ದೀಪಾವಳಿಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರೊಂದಿಗೆ ಭಾರತೀಯ ಜನತಾ ಪಾರ್ಟಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ ಎಂದು ನಳಿನ್ ಹೇಳಿದರು.
Belthangady dosa festival held With prayer and pooja.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm