ಬ್ರೇಕಿಂಗ್ ನ್ಯೂಸ್
13-11-23 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13: ಬಿಜೆಪಿ ಯುವಮೋರ್ಚಾ, ಬೆಳ್ತಂಗಡಿ ಬಿಜೆಪಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣ ವಠಾರದಲ್ಲಿ ದೀಪಾವಳಿ ಪ್ರಯುಕ್ತ 4ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಜನರು ಸೇರಿ ವಿವಿಧ ಮಾದರಿಯ ದೋಸೆಗಳನ್ನು ಸವಿದರು.
ಇದೇ ವೇಳೆ, ಗೋವಿಗೆ ದೋಸೆಯನ್ನು ತಿನ್ನಿಸಿ ಗೋಪೂಜೆಯನ್ನೂ ಮಾಡಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೂ ನಡೆದಿದ್ದು ಆಕರ್ಷಣೆ ಪಡೆಯಿತು. ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಪ್ರಮುಖರಿದ್ದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ಬೆಳ್ತಂಗಡಿಯಂತಹ ಗ್ರಾಮಾಂತರ ಭಾಗದಲ್ಲಿ ಇಂತಹ ಸಾಮೂಹಿಕ ದೀಪಾವಳಿ ಹಬ್ಬವನ್ನು ಆಯೋಜಿಸಿದ ಹರೀಶ್ ಪೂಂಜಾರವರು ಈ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹಿಂದೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಪೋಷಿಸಿಕೊಂಡು ಹೋಗುವಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿವೆ ಎಂದರು.
ನರೇಂದ್ರ ಮೋದಿ ಈ ದೇಶಕ್ಕೆ ಪ್ರಧಾನ ಮಂತ್ರಿ ಆದ ಬಳಿಕ ಹಿಂದೂ ಸಂಸ್ಕ್ರತಿ ಬೆಳಗುತ್ತಿದೆ. ಹಲವು ಪುಣ್ಯಕ್ಷೇತ್ರಗಳು, ಪುಣ್ಯ ನದಿಗಳನ್ನು ಅಭಿವೃದ್ಧಿ ಪಡಿಸಿ ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯನ್ನು ಮೇಲೆತ್ತಿ ಇಡೀ ವಿಶ್ವ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ಜನವರಿಯಲ್ಲಿ ಅಯೋಧ್ಯೆಗೆ ಪ್ರಭು ಶ್ರೀರಾಮಚಂದ್ರನ ಆಗಮನವಾಗುತ್ತಿದ್ದು ಇದರೊಂದಿಗೆ ಇಡೀ ಭಾರತ ದೇಶದ ಸಂಸ್ಕೃತಿ, ಧಾರ್ಮಿಕ ಭಾವನೆ, ನಂಬಿಕೆಗಳು ಉತ್ತುಂಗಕ್ಕೆ ಹೋಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಹಿಂದುಗಳ ಗಣಪತಿ ಹಬ್ಬಕ್ಕೆ, ದೀಪಾವಳಿಗೆ ಹಲವು ನಿರ್ಬಂಧಗಳನ್ನು ಹಾಕುವುದನ್ನು ಕಂಡಿದ್ದೇವೆ. ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಲ್ಲುವ ಅನಿವಾರ್ಯತೆ ಬಂದಿದೆ. ಇಂತಹ ಸಾಮೂಹಿಕ ದೀಪಾವಳಿಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರೊಂದಿಗೆ ಭಾರತೀಯ ಜನತಾ ಪಾರ್ಟಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ ಎಂದು ನಳಿನ್ ಹೇಳಿದರು.
Belthangady dosa festival held With prayer and pooja.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm