ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
12-07-25 02:15 pm
HK News Desk
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
12-07-25 01:42 pm
Mangalore Correspondent
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
12-07-25 01:32 pm
HK News Desk
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm