ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm