ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm